ಸಹ್ಯಾದ್ರಿ ಸುದ್ದಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

10 ವರ್ಷದ ಹಿಂದೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಯಲ್ಲಾಲಿಂಗ ಕೊಲೆ ಕೇಸ್: ಎಲ್ಲಾ ಆರೋಪಿಗಳು ಖುಲಾಸೆ

ಕೊಪ್ಪಳ: 2015ರಲ್ಲಿ ನಡೆದಿದ್ದ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೊಪ್ಪಳದ ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳ ಕೊರತೆಯಿಂದ ಎಲ್ಲಾ 9 ಆರೋಪಿಗಳನ್ನು ಖುಲಾಸೆಗೊಳಿಸಿ ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಹತ್ತು ವರ್ಷಗಳ ಹಿಂದೆ ಜನವರಿ.11, 2015ರಂದು ಕೊಪ್ಪಳದ ಕನಕಗಿರಿ ತಾಲ್ಲೂಕಿನ ಕನಕಾಪುರ ಗ್ರಾಮದ ವಿದ್ಯಾರ್ಥಿಯಾಗಿದ್ದ ಯಲ್ಲಾಲಿಂಗ ಕೊಲೆಯಾಗಿದ್ದನು. ಯಲ್ಲಾಲಿಂಗನನ್ನು ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಕೊಲೆ ಮಾಡಲಾಗಿತ್ತು.  ಪ್ರಕರಣ ಇಡೀ ದೇಶದಲ್ಲೇ ಬಹುದೊಡ್ಡ ಸದ್ದು ಮಾಡಿತ್ತು. ಇದೀಗ ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ  ಈ ಪ್ರಕರಣದ ಅಂತಿಮ ತೀರ್ಪು ಪ್ರಕಟಿಸಿದ್ದು  ಸಾಕ್ಷಾಧಾರಗಳ ಕೊರತೆಯಿಂದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿದೆ.

ಯಲ್ಲಾಲಿಂಗ ಕೊಲೆ ಪ್ರಕರಣದಲ್ಲಿ ಸಚಿವ ಶಿವರಾಜ್ ತಂಗಡಗಿಯ ಆಪ್ತ ಹನುಮೇಶ್ ನಾಯಕ್ ಮಹಾಂತೇಶ್ ನಾಯಕ್ ದುರ್ಗಪ್ಪ ನಂದೀಶ್ ಸೇರಿ 9 ಜನರ ವಿರುದ್ದ ಕೇಸ್ ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ಶಿವರಾಜ್ ತಂಗಡಗಿ ಅಂದು ಸಚಿವ ಸ್ಥಾನ ಕಳೆದುಕೊಂಡಿದ್ದರು.  ಇದೀಗ ಎಲ್ಲಾ ಆರೋಪಿಗಳನ್ನ ಕೋರ್ಟ್ ಖುಲಾಸೆಗೊಳಿಸಿದೆ.

 

Related posts

ಗುಂಡಿಕ್ಕಿ ಕೊಲ್ಲಿ ಹೇಳಿಕೆ: ಕೆ.ಎಸ್ ಈಶ್ವರಪ್ಪಗೆ ಮೌಖಿಕ ಎಚ್ಚರಿಕೆ ನೀಡಿದ ಕೋರ್ಟ್

Editor

344 ವರ್ಷದ ಇತಿಹಾಸವುಳ್ಳ ಶ್ರೀ ರಾಘವೇಂದ್ರ ಸ್ವಾಮಿ ಮಠ, ಬಾಳಗಾರುನಲ್ಲಿ 353ನೇ ರಾಯರ ಆರಾಧನೆ

Editor

Editor