ಸಹ್ಯಾದ್ರಿ ಸುದ್ದಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಆಶಾ ಕಾರ್ಯಕರ್ತೆಯರು ಮನಸು ಮಾಡಿದರೆ ಸಕ್ಕರೆ ಕಾಯಿಲೆ ಬಗೆಗೂ ಜನರಲ್ಲಿ ದೊಡ್ಡ ಜಾಗೃತಿ ಮೂಡಿಸಲು ಸಾಧ್ಯ- ಎಸ್ ಪಿ ಮಿಥುನ್ ಕುಮಾರ್

ಶಿವಮೊಗ್ಗ : ಗ್ರಾಮೀಣ ಭಾಗದಲ್ಲಿ ಜನರಿಗೆ ಹತ್ತಿರವಾಗಿ ಸೇವೆ ಸಲ್ಲಿಸುವ ಆಶಾ ಕಾರ್ಯಕರ್ತೆಯರು ಮನಸು ಮಾಡಿದರೆ ಸಕ್ಕರೆ ಕಾಯಿಲೆ ಬಗೆಗೂ ಜನರಲ್ಲಿ ದೊಡ್ಡ ಜಾಗೃತಿ ಮೂಡಿಸಲು ಸಾಧ್ಯವಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಕಾರದೊಂದಿಗೆ ಮೆಟ್ರೋ ಆಸ್ಪತ್ರೆ ಮತ್ತು ವಿನ್ ಲೈಫ್ ಟ್ರಸ್ಟ್ ವತಿಯಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಇಂದು ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ ಮಧು ಮೇಹ ಮತ್ತು ತುರ್ತು ಜೀವ ರಕ್ಷಕ( ಸಿಪಿಆರ್ ) ಕುರಿತು ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೊರೋನಾ ಸಂದರ್ಭದಲ್ಲಿ ನಾನು ಚಿಕ್ಕಬಳ್ಳಾಪುರದಲ್ಲಿದೆ. ಆಗ ಆಶಾ ಕಾರ್ಯಕರ್ತೆಯರು ಜೀವ ಭಯ ತೊರೆದು ಮನೆ ಮನೆಗೆ ತೆರಳಿ ಕೊರೋನಾ ಬಗ್ಗೆ ಜಾಗೃತಿ ಮೂಡಿಸಿದ್ದು, ಕೊರೋನಾ ಬಂದ ಜನರ ಆರೈಕೆ ಮಾಡಿದ್ದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಇದು ಚಿಕ್ಕಬಳ್ಳಾಪುರ ಮಾತ್ರವಲ್ಲ ಇಡೀ ದೇಶದಲ್ಲಿಯೇ ಅವರು ಅಪಾರವಾಗಿ ಸೇವೆ ಸಲ್ಲಿಸಿದರು ಎಂದು ಶ್ಲಾಘಿಸಿದ ಅವರು, ಆಶಾ ಕಾರ್ಯಕರ್ತೆಯರು ಮನಸು ಮಾಡಿದರೆ ಸಕ್ಕರೆ ಕಾಯಿಲೆಯ ಬಗೆಗೆ ದೊಡ್ಡ ಜಾಗೃತಿ ಆಂದೋಲನವನ್ನೇ ಮಾಡಬಹುದು. ಆಗ ಈ ಕಾರ್ಯಕ್ರಮ ಸಾರ್ಥಕವಾಗಲಿದೆ ಎಂದರು.
ಸಕ್ಕರೆ ಕಾಯಿಲೆ ನಮ್ಮ ಜೀವನ ಶೈಲಿಗೆ ಸಂಬಂಧಿಸಿದ ಕಾಯಿಲೆ. ಈಗ ಬದಲಾದ ನಮ್ಮ ಜೀವನಶೈಲಿಯ ಕಾರಣಕ್ಕೆ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಎನ್ನುವುದು ಮಾಮೂಲು ಆಗಿದೆ. ಹಾಗಂತ ಇದನ್ನು ನಿರ್ಲಕ್ಷ್ಯ ಮಾಡುವಂತಿಲ್ಲ. ಇದು ತುಂಬಾ ಅಪಾಯಕಾರಿ ಕಾಯಿಲೆ. ಅದಾಗ್ಯೂ ಇದನ್ನು ಸರಿಯಾಗಿ ನಿರ್ವಹಣೆ ಮಾಡಿಕೊಂಡರೆ ಯಾವುದೇ ಆತಂಕವಿಲ್ಲದೆ ಬದುಕುಬಹುದು ಎಂದ ಅವರು, ಅದಕ್ಕೆ ತಂದೆ ಯವರನ್ನೇ ಉದಾಹರಿಸಿದರು.
ಮಧು ಮೇಹ ಅಥವಾ ಸಕ್ಕರೆ ಕಾಯಿಲೆ ಯೆಂದರೆ ತುಂಬಾ ಅಪಾಯಕಾರಿ ಕಾಯಿಲೆ ಎನ್ನುವ ನಂಬಿಕೆಯಿದೆ. ಆದರೂ ಸಕ್ಕರೆ ಕಾಯಿಲೆ ಇದ್ದವರು ಅದರ ನಿರ್ವಹಣೆಯ ಕಡೆ ಹೆಚ್ಚು ಗಮನ ಹರಿಸಿದರೆ ಹೆಚ್ಚು ವರ್ಷ ಯಾವದೇ ಆತಂಕವಿಲ್ಲದೆ ಬದುಕಬಹುದು. ಅದಕ್ಕೆ ಜಾಗೃತಿ ಬೇಕಿದೆ. ಆ ನಿಟ್ಟಿನಲ್ಲಿ ªಮೆಟ್ರೋ ಆಸ್ಪತ್ರೆ ಹಾಗೂ ವಿನ್ ಲೈಫ್ ಮಧು ಮೇಹ ಮತ್ತು ಸಿಪಿಆರ್ ಕುರಿತು ಹಮ್ಮಿಕೊಂಡಿರುವ ತರಬೇತಿ ಕಾರ್ಯಾಗಾರ ಅರ್ಥಪೂರ್ಣವಾಗಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಸ್. ನಟರಾಜ್ ಮಾತನಾಡಿ, ಆರೋಗ್ಯ ಸುಧಾರಣೆಯಲ್ಲಿ ಆಶಾ ಕಾರ್ಯಕರ್ತೆಯರು ಕೊಡುಗೆ ಅಪಾರವಾಗಿದೆ. ಅವರಿಗೆ ಇಂತಹ ತರಬೇತಿ ಅಗತ್ಯವಾಗಿ ಬೇಕಾಗಿತ್ತು. ಆ ನಿಟ್ಟಿನಲ್ಲಿ ಮೆಟ್ರೋ ಆಸ್ಪತ್ರೆ ಹಾಗೂ ವಿನ್ ಲೈಫ್ ಮಧು ಮೇಹ ಮತ್ತು ಸಿಪಿಆರ್ ಕುರಿತು ಹಮ್ಮಿಕೊಂಡಿರುವ ತರಬೇತಿ ಕಾರ್ಯಾಗಾರ ಶ್ಲಾಘನೀಯವಾದದ್ದು ಎಂದರು.
ಭಾರತದಂತಹ ದೇಶದಲ್ಲಿ ಮಧುಮೇಹ ತುಂಬ ಸಾಮಾನ್ಯವಾಗಿದೆ. ಯುವಜನರಲ್ಲಿ ಇದು ಈಗ ಹೆಚ್ಚಾಗುತ್ತಿದೆ. ಪರೀಕ್ಷೆ ನಡೆಸಿದರೆ ಶೇ. 18 ರಿಂದ 20 ರಷ್ಟು ಜನರಿಗೆ ಮಧುಮೇಹ ಇರುತ್ತದೆ. ಇದಕ್ಕೆ ಪ್ರಮುಖ ಕಾರಣ ಬದಲಾದ ಜೀವನ ಶೈಲಿ. ನಾವು ನಮ್ಮ ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳುವುದೇ ಇದಕ್ಕೆ ಪರಿಹಾರ ಎಂದರು. ವೇದಿಕೆಯಲ್ಲಿ ಮೆಟ್ರೋ ಆಸ್ಪತ್ರೆಯ ಡಾ. ಪಿ. ಲಕ್ಷ್ಮೀ ನಾರಾಯಣ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ಮೆಟ್ರೋ ಆಸ್ಪತ್ರೆಯ ಎಂ.ಡಿ. ಡಾ. ಪೃಥ್ವಿ ಬಿ.ಸಿ. ಗಣ್ಯರನ್ನು ಸ್ವಾಗತಿಸಿದರು. ಆರ್ ಸಿ ಹೆಚ್ ಡಾ. ಒ ಮಲ್ಲಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರಾಜ್ ನಾಯ್ಕ್ ಇದ್ದರು.

Related posts

ಹಣಕಾಸಿನ ಪರಿಸ್ಥಿತಿ ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಬಗ್ಗೆ ಕ್ರಮ- ಸಿಎಂ ಸಿದ್ದರಾಮಯ್ಯ

Editor

ಶಿವಮೊಗ್ಗ ನಗರಕ್ಕೆ ಟ್ರಕ್ ಟರ್ಮಿನಲ್(ಲಾರಿ ನಿಲ್ದಾಣ) ಬೇಕು-ಬಿ.ಎ. ತಲ್ಕೀನ್ ಅಹ್ಮದ್ ಆಗ್ರಹ

Editor

ರಾಮನನ್ನ ಬಿಜೆಪಿ ಲೋಕಸಭಾ ಚುನಾವಣೆ ಚೀಪ್  ಕ್ಯಾಂಪೇನರ್ ಮಾಡಿಕೊಂಡಿದ್ದಾರೆ- ಹೆಚ್.ವಿಶ್ವನಾಥ್ ವ್ಯಂಗ್ಯ

Editor