ಸಹ್ಯಾದ್ರಿ ಸುದ್ದಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಶ್ನಿಸಿ ಅರ್ಜಿ ವಿಚಾರಣೆ ಆ.31ಕ್ಕೆ ಮುಂದೂಡಿಕೆ

ಬೆಂಗಳೂರು:  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ  ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಆಗಸ್ಟ್ 31ಕ್ಕೆ ಮುಂದೂಡಿಕೆ ಮಾಡಿದೆ.

ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ  ನ್ಯಾ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಲ್ಲಿ ನಡೆಯಿತು. ಈ ವೇಳೆ ವಾದ ಸಿಎಂ ಸಿದ್ದರಾಮಯ್ಯ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ,  ಪಿಸಿ ಕಾಯ್ದೆ 17ಎ ಅಡಿ ಪೂರ್ವಾನುಮತಿ ಬೇಕು. 17ಎ ಮಾನದಂಡ ಪಾಲನೆಯಾಗದಿದ್ದರೂ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಅಬ್ರಾಹಂ ದೂರು ವಜಾಗೊಳಿಸಿ ದಂಡ ವಿಧಿಸಬೇಕು. ರಾಜ್ಯಪಾಲರು ದೂರು ವಜಾಗೊಳಿಸಿ ದಂಡ ವಿಧಿಸಬೇಕು . ರಾಜ್ಯಪಾಲರ ಸಮಯ ವ್ಯರ್ಥ ಮಾಡಿದ್ದಕ್ಕೆ ದಂಡ ವಿಧಿಸಬೇಕು  ಎಂದು ಮನವಿ ಮಾಡಿದರು. ತರಾತುರಿಯಲ್ಲಿ ವಿವೇಚನೆ ಬಳಸದೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇಬ್ಬರ ದೂರುಗಳ ಸಂಬಂಧ ಶೋಕಾಸ್ ನೋಟಿಸ್ ನೀಡಿಲ್ಲ.  ಪ್ರಾಸಿಕ್ಯೂಷನ್ ಗೆ ಅನುಮತಿ ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು.

ವಾದ ಆಲಿಸಿದ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಆಗಸ್ಟ್ 31 ರ ಬೆಳಿಗ್ಗೆ 10.30ಕ್ಕೆ ಮುಂದೂಡಿಕೆ ಮಾಡಿತು. ಈ ಹಿಂದಿನ ಮಧ್ಯಂತರ ಆದೇಶ ಮುಂದುವರೆಸಲು ಸೂಚನೆ ನೀಡಿದೆ. ಆಗಸ್ಟ್ 31 ರಂದು ಗವರ್ನರ್ ಪರ ಸಾಲಿಸಿಟರ್ ಜನರಲ್ ಮೆಹ್ತಾ ವಾದ ಮಂಡನೆ ಮಾಡಲಿದ್ದಾರೆ.

Related posts

ಆಕಾಶವಾಣಿಯಲ್ಲಿ ನವದೇವಿ ದರ್ಶನ- ನವರಾತ್ರಿ ವಿಶೇಷ ಕಾರ್ಯಕ್ರಮ ಸರಣಿ

Editor

ಜನಿವಾರ ತೆಗೆಸಿದ ಘಟನೆಗೆ ಖಂಡಿಸಿದ ಸಚಿವ ಮಧು ಬಂಗಾರಪ್ಪ: ಕ್ರಮ ಕೈಗೊಳ್ಳುವ ಭರವಸೆ

Editor

ಕೊರೋನಾ ಭೀತಿ ಹಿನ್ನೆಲೆ: ರಾಜ್ಯದಲ್ಲಿ ಪ್ರತಿನಿತ್ಯ 5 ಸಾವಿರ ಕೋವಿಡ್ ಟೆಸ್ಟ್ ನಡೆಸಲು ತೀರ್ಮಾನ

Editor